Tuesday 21 August 2012

ವಿಶ್ವದ ಮಹಾನ್ ಹೋರಾಟಗಾರ್ತಿ ಮಹಿಳೆ ಆನ್ ಸೂಚಿ:ಸುಧಾ ಮೂರ್ತಿಯವರ ದೃಷ್ಠಿಯಲ್ಲಿ

'ಈ ಜಗತ್ತು ಕಂಡ ಅದ್ಭುತ ಹಾಗೂ ಜೀವಂತ ವ್ಯಕ್ತಿಯ ಹೋರಾಟದ ಕಥೆಯ ತಿರುಳನ್ನು ಕಣ್ಣಿಗೆ ಕಟ್ಟಿದ ನಮ್ಮ ಕನ್ನಡ ನಾಡಿನ ಹೆಮ್ಮೆಯ ಆದರ್ಶ ಮತ್ತು ಮಾದರಿ ಮಹಿಳೆ  ಹಿರಿಯ ಸಹೋದರಿ ಸುಧಾ ನಾರಾಯಣ ಮೂರ್ತಿ.'

ಈ ದಿನದ ಕನ್ನಡ ಪ್ರಭ (21-08-2012) ರ ಪತ್ರಿಕೆಯ ಮುಖ ಪುಟದ "ಸೂಚಿ ಯೊಂದಿಗೆ ಒಂದು ಸುಂದರ ಸಂಜೆ" ಎಂಬ ವಿಶಿಷ್ಟ ಹಾಗೂ ಮೌಲಿಕ ಚಿಂತನೆಯ ಅಮೋಘ ಅನುಭವವನ್ನು ಸುಧಾ ಮೂರ್ತಿಯವರ ಲೇಖನಿಯಿಂದ ಓದಿ ಪುಳಕಿತನಾದೆ.ಕಣ್ಣಾಲಿಗಳು ತೇವಗೊಂಡವಲ್ಲದೇ ಆ ಮಹಿಳೆಯ ಧೀರೋದಾತ್ತ ಧೀಃಶಕ್ತಿ ವ್ಯಕ್ತಿತ್ವ ಹಾಗೂ ಆ ಮಹಾ ತಾಯಿಯ ಹೋರಾಟದ ತಲಸ್ಪರ್ಷಿ ನಿರೂಪಣೆಯನ್ನು ತಿಳಿದು ರೋಮಾಂಚನವಾಯಿತು.

ಮಯನ್ ಮಾರ್ (ಬರ್ಮಾ) ದೇಶದ ಜನರಲ್ ಆನ್ ಸಾನ್ ಮತ್ತು ಸೂಚಿ ದಂಪತಿಗಳ ಪುತ್ರಿಯೇ ಈ 'ಆನ್ ಸೂಚಿ'.ಇವಳ ಜೀವನವೇ ಒಂದು ದೀರ್ಘ ಹೋರಾದ ಕಥೆಯಾದ ಬಗೆಯನ್ನು ಸುಧಾ ನಾರಾಯಣ ಮೂರ್ತಿಯವರು ತಮ್ಮ ಲೇಖನಿಯಿಂದ ಪಡೆಮೂಡಿಸಿ ಅವರ ಸ್ಪೂರ್ಥಿಯುತ ಬದುಕಿನ ಚಿತ್ತಾಕರ್ಷಕ ವ್ಯಕ್ತಿತ್ವದ ಘಮವನ್ನು ಕನ್ನಡ ಪ್ರಭ ಓದುಗರಿಗೆ ಉಣ ಬಡಿಸಿದ್ದಾರೆ.

14-08-2012 ರಂದು  "ನಿಪಿಡೋರ್ " ನಲ್ಲಿ ಸಂಜೆ 5-ಘಂಟೆಗೆ ತಮ್ಮ ಪತಿ ಭಾರತ ದೇಶದ ಹೆಮ್ಮೆಯ ಹಾಗೂ ಕನ್ನಡ ನಾಡಿನ ಕೀರ್ತಿಶಾಲಿ ಸಾಧಕ ಸಂಪನ್ನ ಡಾ|| ನಾರಾಯಣ ಮೂರ್ತಿ ಹಾಗೂ ತಮ್ಮ ಸಹೋದರಿಯರೊಂದಿಗೆ ವಿಶ್ವದ ಮಹಾನ್ ಹೋರಾಟಗಾರ್ತಿ ಮಹಿಳೆ ಆನ್ ಸೂಚಿ ಯನ್ನು ಭೇಟಿಯಾಗಿ ಅವರೊಂದಿಗೆ ಕಳೆದ ಮಧು ಕ್ಷಣಗಳನ್ನು ಕಣ್ಣಿಗೆ ಕಟ್ಟಿದ್ದಾರೆ.ಈ ಅಪರೂಪದ ಹಾಗೂ ಅವಿಸ್ಮರಣೀಯವಾಗುವ ಲೇಖನವನ್ನು ಈ ದಿನದ ಕನ್ನಡ ಪ್ರಭದಲ್ಲಿ ಓದಿ ನಮ್ಮ ಹೋರಾಟದ ಬದುಕಿಗೆ ಸ್ಪೂರ್ಥಿ ಪಡೆಯಬಹುದು.

ಸೂಚಿಯವರು-ಸುಧಾ ಮೂರ್ತಿಯವರನ್ನು ಬೀಳ್ಕೊಡುವಾಗ ಸುಧಾ ಮ್ಯಾಡಮ್ ಅವರು ನಿವೇದಿಸಿಕೊಂಡ ಈ ಸಾಲುಗಳನ್ನು ಓಮ್ಮೆ ಓದಿ.
  " ಮ್ಯಾಡಮ್ ಭಾರತೀಯ ಸಂಸ್ಕೃತಿಯಲ್ಲಿ ನಮಗಿಂತ ಹಿರಿಯರಾದ,ಜ್ಞಾನದಿಂದಲೂ ಗುಣದಿಂದಲೂ ಶ್ರೇಷ್ಠರಾದ ವ್ಯಕ್ತಿಗಳಿಗೆ ಕಾಲು ಮುಟ್ಟಿ ನಮಸ್ಕರಿಸಿ ಗೌರವ ಸೂಚಿಸುವದು ಪದ್ಧತಿ.ಈ ಪದ್ಧತಿ ಅನೇಕ ಕಾಲದಿಂದಲೂ ನಡೆದು ಬಂದಿದೆ.ನೀವು ನನ್ನ ದೃಷ್ಠಿಯಲ್ಲಿ ಎಲ್ಲ ರೀತಿಯಿಂದಲೂ ಈ ನಮಸ್ಕಾರಕ್ಕೆ ಯೋಗ್ಯರು,ನನಗೆ ನೀವು 'ಬೇಡ' ಅನ್ನಕೂಡದು ಎಂದಾಗ ತುಂಬಾ ಸಂತೋಷ ಮತ್ತು ಅಂತಃಕರಣದಿಂದ ನನ್ನ ಎರಡೂ ಕೈ ಹಿಡಿದು ಈ ಪದ್ಧತಿ ನಮ್ಮ ಬೌದ್ಧ ಧರ್ಮದಲ್ಲಿಯೂ ಇದೆ ಎಂದರು,ನಾನು ಬಾಗಿ ಅವರ ಕಾಲಿಗೆ ನಮಸ್ಕರಿಸಿದೆ."

(ಜೀವನ ಸ್ಫರ್ಥಿಗೆ ಸೂಚಿಯ ಹೋರಾಟದ ಬದುಕು ನಮಗೆ ಆದರ್ಶಪ್ರಾಯವಾಗಲಿ ಎಂಬುದೇ ನನ್ನಾಶಯ)
   
=ಬನವಾಸಿ ಸೋಮಶೇಖರ್.